×
Ad

ದಿಲ್ಲಿ ಹಿಂಸಾಚಾರ ಖಂಡಿಸಿ ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರತಿಭಟನೆ

Update: 2020-03-13 17:08 IST

ನರಿಂಗಾನ: ದಿಲ್ಲಿ ಹಿಂಸಾಚಾರ ಖಂಡಿಸಿ ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ ಗುರುವಾರ ರಾತ್ರಿ ತೌಡುಗೋಳಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಲಾಯಿತು.

ಎಸ್ಸೆಸ್ಸೆಫ್ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಖಾಮಿಲ್ ಸಖಾಫಿ ಹಾಗೂ ಕ್ಯಾಂಪಸ್ ವಿಭಾಗ ಸೆಕ್ರೆಟರಿ ಇಲ್ಯಾಸ್ ಪೊಟ್ಟೊಳಿಕೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಮಸೂದ್ ಬಾಹಸನಿ ಸಂವಿಧಾನ ಪೀಠಿಕೆ ವಾಚಿಸಿದರು.

ಈ ಸಂದರ್ಭ ಡಿವಿಷನ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ, ಮನ್ಸೂರ್ ಹಿಮಮಿ, ನರಿಂಗಾನ ಗ್ರಾಪಂ ಸದಸ್ಯ ಅಬ್ದುಲ್ ರಹಿಮಾನ್, ಡಿವಿಷನ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ ನಗರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News