ಬೆಂಗಳೂರು: ಭೀಕರ ವಾಹನ ಅಪಘಾತಕ್ಕೆ ನಾಲ್ವರು ಬಲಿ

Update: 2020-03-13 17:34 GMT

ಬೆಂಗಳೂರು, ಮಾ.13: ಶರವೇಗವಾಗಿ ಸಾಗುತ್ತಿದ್ದ ಕಾರೊಂದು ಡಿವೈಡರ್‌ನಿಂದ ಹಾರಿ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರಲವಲಯದ ನೆಲಮಂಗಲ ಸಮೀಪದ ಎಂಟಗಾನಹಳ್ಳಿ ಬಳಿ ಶುಕ್ರವಾರ ನಡೆದಿದೆ.

ಹೆಬ್ಬಾಳದ ಕೆಂಪಾಪುರದ ನಿವಾಸಿಗಳಾದ ಕಾವೇರಮ್ಮ(80), ರಶ್ಮಿ(50) ಹಾಗೂ ಶಿವಕುಮಾರ್(27), ಕಿರಣ್(24) ಮೃತಪಟ್ಟವರು ಎಂದು ತಿಳಿದುಬಂದಿದೆ.

ಶುಕ್ರವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ಹಿರೀಸಾವೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬೆಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಹೋಗುತ್ತಿದ್ದ ಇನ್ನೊಂದು ಕಾರಿಗೆ ರಸ್ತೆಯ ಡಿವೈಡರ್ ಹಾರಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News