ಮೂಡಿಗೆರೆ: ಬೈಕ್ ಸವಾರನ ಮೇಲೆ ಕಾಡಾನೆ ದಾಳಿ

Update: 2020-03-16 05:10 GMT
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಮಾ.16: ಬೈಕ್ ಸವಾರನೋರ್ವನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಮೂಡಿಗೆರೆ ತಾಲೂಕಿನ ಕುಂಬರಡಿ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.

ಅವಿನಾಶ್ ಎಂಬವರ ಮೇಲೆ ಈ ದಾಳಿ ನಡೆದಿದೆ. ಅವರು ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಒಂಟಿ ಸಲಗ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಈ ವೇಳೆ ಅವಿನಾಶ್‌ ಬೈಕಿನಿಂದ ಹಾರಿ ತಪ್ಪಿಸಿಕೊಂಡಿದ್ದಾರೆ.

ಕಾಡಾನೆಯು ಸದ್ಯ ಕುಂಬರಡಿ ಗ್ರಾಮದಲ್ಲೇ ಬೀಡುಬಿಟ್ಟಿದ್ದು, ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News