ಇಟಲಿಯಲ್ಲಿರುವ ಮಗಳನ್ನು ರಕ್ಷಿಸುವಂತೆ ಸಚಿವ ಆನಂದ್ ಸಿಂಗ್ ಮನವಿ

Update: 2020-03-16 18:29 GMT

ಬೆಂಗಳೂರು, ಮಾ.16: ಇಟಲಿಯಲ್ಲಿ ಶಿಕ್ಷಣ ಪಡೆಯುತ್ತಿರುವ ನನ್ನ ಮಗಳನ್ನು ರಕ್ಷಿಸಿ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಆರೋಗ್ಯ ಸಚಿವ ಶ್ರೀರಾಮುಲುರನ್ನು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಶ್ವದೆಲ್ಲೆಡೆ ಕೊರೋನ ತನ್ನ ಅರ್ಭಟ ಮುಂದುವರಿಸಿದ್ದು, ಇಟಲಿಯಲ್ಲಿ ಹಲವಾರು ಪ್ರಾಣಗಳನ್ನು ಬಲಿ ಪಡೆದಿದೆ. ಹೀಗಾಗಿ, ಸೋಮವಾರ ವಿಧಾನಪರಿಷತ್ ಕಲಾಪಕ್ಕೆ ಆಗಮಿಸಿದ್ದ ಆನಂದ್ ಸಿಂಗ್, ಸಚಿವ ಶ್ರೀರಾಮುಲು ಬಳಿ ತೆರಳಿ, ಮಗಳನ್ನು ರಕ್ಷಿಸಿಕೊಡುವಂತೆ ಮನವಿ ಸಲ್ಲಿಸಿದರು ಎನ್ನಲಾಗಿದೆ.

ನನ್ನ ಮಗಳು ಇಟಲಿಯಲ್ಲಿ ಓದುತ್ತಿದ್ದಾಳೆ. ನನ್ನ ಮಗಳ ಜತೆ 60 ಭಾರತೀಯ ವಿದ್ಯಾರ್ಥಿಗಳೂ ಇದ್ದಾರೆ. ಮಾ.10ರಿಂದ ರೋಮ್ ಏರ್‌ಪೋರ್ಟ್‌ನಲ್ಲೇ ಸಿಕ್ಕಿಕೊಂಡಿದ್ದು, ಅವರು ಭಾರತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರ ನೆರವಿಗೆ ರಾಜ್ಯ-ಕೇಂದ್ರ ಸರಕಾರ ಧಾವಿಸಬೇಕು ಎಂದು ಅವರು ಮನವಿಯಲ್ಲಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News