ತಮ್ಮ ಆದೇಶವನ್ನೇ ಉಲ್ಲಂಘಿಸಿ ಮದುವೆಯಲ್ಲಿ ಪಾಲ್ಗೊಂಡ ಬಿಎಸ್‌ವೈ ವಿರುದ್ಧ ರಾಜ್ಯಪಾಲರಿಗೆ ದೂರು

Update: 2020-03-17 14:55 GMT

ಬೆಂಗಳೂರು, ಮಾ.17: ಕೊರೋನ ವೈರಸ್ ಸಂಬಂಧ ಸಾರ್ವಜನಿಕರ ಹಿತಕ್ಕಾಗಿ ನೀತಿ ನಿಯಮ ಆದೇಶಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಆದೇಶ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಮಂಗಳವಾರ ರಾಜಭವನಕ್ಕೆ ತೆರಳಿ ಟಿ.ನರಸಿಂಹಮೂರ್ತಿ ಅವರು ದೂರು ಸಲ್ಲಿಸಿದ್ದು, ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮದುವೆ ಸಮಾರಂಭಗಳನ್ನು ಮುಂದೂಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚಿಗೆ ಆದೇಶ ಹೊರಡಿಸಿದ್ದರು. ಸರಕಾರವೇ ಸುತ್ತೋಲೆ ಹೊರಡಿಸಿದ್ದರೂ, ಯಡಿಯೂರಪ್ಪ ಅವರು, ತಮ್ಮ ಸಹೋದ್ಯೋಗಿಯ ಮಗಳ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ಅವರಷ್ಟೇ ಅಲ್ಲದೇ, ಅವರೊಂದಿಗೆ ಸಚಿವರು, ಶಾಸಕರು ಪಾಲ್ಗೊಂಡಿದ್ದರು.

ಈ ಮೂಲಕ ಸರಕಾರವೇ ಸುತ್ತೋಲೆ ಹೊರಡಿಸಿದ್ದರೂ ಆದೇಶ ಉಲ್ಲಂಘಿಸಿದ್ದಾರೆ. ಐಪಿಸಿ 188ರ ಅಡಿ ಸರಕಾರದ ಆದೇಶ ಉಲ್ಲಂಘನೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News