​ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2020-03-17 15:57 GMT

ಕೋಟ, ಮಾ.17: ಕಾಲು ನೋವಿನಿಂದ ಬಳಲುತ್ತಿದ್ದ ನಂಚಾರು ಗ್ರಾಮದ ಹೆಸ್ಕುಂದ ನಿವಾಸಿ ಪುರುಷ ನಾಯ್ಕ ಎಂಬವರ ಪತ್ನಿ ರುಕ್ಮಿಣಿ(70) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.16ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದು ಮಾ.15ರಂದು ಮನೆಯ ಸಮೀಪದ ಹಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಳಕರ್ಜೆಯ ಪುಟ್ಟ ಕಲಾಲ್(60) ಎಂಬವರು ಮಾ.17ರಂದು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿ ದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬಾಡಾ ಕಳಿಹೊಳೆ ನಿವಾಸಿ ಮಂಜುನಾಥ ನಾಯ್ಕ್ ಎಂಬವರ ಮಗ ರಾಜಣ್ಣ(40) ಎಂಬವರು ಮಾ.16ರಂದು ರಾತ್ರಿ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News