×
Ad

ಜನ ಸೇರುವ ಕಾರ್ಯಕ್ರಮ ನಡೆದರೆ ಅಧಿಕಾರಿಗಳ ವಿರುದ್ಧ ಕ್ರಮ: ಉಡುಪಿ ಡಿಸಿ ಜಿ.ಜಗದೀಶ್

Update: 2020-03-21 21:33 IST

ಉಡುಪಿ, ಮಾ.21: ಕೋವಿಡ್-19 ಕಾಯಿಲೆ ಕುರಿತಂತೆ ತಾತ್ಕಾಲಿಕ ನಿಯಮಾವಳಿಗಳನ್ನು ಹೊರಡಿಸಿ, ಸಾರ್ವಜನಿಕರು ಕೆಲವು ವಿಶೇಷ ಕ್ರಮಗಳನ್ನು ಕಾಯಿಲೆಯ ಸ್ಪೋಟ ಹಾಗೂ ಹರಡುವುದನ್ನು ತಡೆಗಟ್ಟಲು ತೆಗೆದುಕೊಳ್ಳುವಂತೆ ರಾಜ್ಯ ಸರಕಾರವು ಆದೇಶಿಸಿದ್ದು, ಅದರಂತೆ ಅನುಸರಣಾ ಕ್ರಮಗಳನ್ನು ಸಾರ್ವತ್ರಿಕವಾಗಿ ಪಾಲಿಸುವ ಬಗ್ಗೆ ಈಗಾಗಲೇ ಆದೇಶಗಳನ್ನು ಹೊರಡಿಸಲಾಗಿದೆ. ಈಗಾಗಲೇ ಹೊರಡಿಸಿರುವ ಆದೇಶಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಕಂದಾಯ ನಿರೀಕ್ಷಕರು, ಗ್ರಾಮಕರಣಿಕರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕೋವಿಡ್-19 ಕಾಯಿಲೆಯ ಬಗ್ಗೆ ನಿಗಾವಹಿಸಬೇಕು. ಈ ಬಗ್ಗೆ ಜಾಗೃತವಾಗಿದ್ದು, ಕಾಯಿಲೆ ಸ್ಪೋಟ ಮತ್ತು ಹರಡುವುದನ್ನು ತಡೆಗಟ್ಟಲು ತೀವ್ರ ಕ್ರಮ ವಹಿಸಬೇಕು ಎಂದವರು ಹೇಳಿದ್ದಾರೆ.

ಈಗಾಗಲೇ ವಿದೇಶಗಳಿಂದ ಬಂದು ಗೃಹ ನಿಗಾದಲ್ಲಿರುವವರು ಅವರಿಗೆ ನಿಗದಿಪಡಿಸಿದ ಅವಧಿಯಲ್ಲಿ ಮನೆಯಲ್ಲಿದ್ದು, ಅವುಗಳನ್ನು ಪೂರ್ಣಗೊಳಿಸುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಕರಣಿಕರು ಮತ್ತು ಕಂದಾಯ ನಿರೀಕ್ಷಕರು ಕ್ರಮ ವಹಿಸಬೇಕು. ಅಲ್ಲದೇ ಅವರ್ಯಾರು ಹೊರ ಹೋಗದಂತೆ ಎಚ್ಚರಿಕೆ ವಹಿಸಬೇಕು. ಅವರು ಹೊರಹೋದಲ್ಲಿ ಅದಕ್ಕೆ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಂದಾಯ ನಿರೀಕ್ಷಕ ಹಾಗೂ ಗ್ರಾಮಕರಣಿಕರು ಜವಾಬ್ದಾರರಾಗಿರುತ್ತಾರೆ ಎಂದರು.

ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿ ಜನ ಸೇರುವ ಯಾವುದೇ ಕಾರ್ಯಕ್ರಮಗಳು ನಡೆಯದಂತೆ ನೋಡಿಕೊಳ್ಳುವುದು ಸಂಬಂಧಪಟ್ಟ ಗ್ರಾಮಕರಣಿಕರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿಯಾಗಿದೆ. ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿ ಯಾವುದೇ ಜನ ಸೇರುವ ಕಾರ್ಯಕ್ರಮಗಳನ್ನು ನಡೆಯದಂತೆ ಅವರು ನೋಡಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಗಮನಕ್ಕೆ ಬಂದಲ್ಲಿ ಸಂಬಂಧಪಟ್ಟ ಗ್ರಾಮಕರಣಿಕರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಎಲ್ಲಾ ಕಾರ್ಯಗಳ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ತಹಶೀಲ್ದಾರರು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ನೋಡಿಕೊಳ್ಳಬೇಕು. ಇದರಲ್ಲಿ ಯಾವುದೇ ಲೋಪಗಳಾದಲ್ಲಿ ಮತ್ತು ಸೆಕ್ಷನ್ 144(3)ರ ಅನುಷ್ಟಾನದಲ್ಲಿ ಯಾವುದೇ ತೊಂದರೆಗಳು ಉಂಟಾದಲ್ಲಿ ಸಂಬಂಧಪಟ್ಟ ತಹಶೀಲ್ದಾರರು ಮತ್ತು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಜವಾಬ್ದಾರರಾಗಿರುತ್ತಾರೆ. ಲೋಪವಾದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ನಗರಸಭೆ/ ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಇಂತಹ ಕಾರ್ಯಗಳ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ನಗರಸಭಾ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಮಾಡಬೇಕು. ಇದರಲ್ಲಿ ಯಾವುದೇ ಲೋಪಗಳಾ ದಲ್ಲಿ ಮತ್ತು ಸೆಕ್ಷನ್ 144(3) ಅನುಷ್ಟಾನದಲ್ಲಿ ತೊಂದರೆಗಳು ಉಂಟಾದಲ್ಲಿ ಸಂಬಂಧಪಟ್ಟ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಜವಾಬ್ದಾರರಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News