ಮಧ್ಯಪ್ರದೇಶ: ಕಾಂಗ್ರೆಸ್ ತೊರೆದಿದ್ದ 22 ಶಾಸಕರು ಬಿಜೆಪಿಗೆ ಸೇರ್ಪಡೆ

Update: 2020-03-21 18:06 GMT

ಹೊಸದಿಲ್ಲಿ, ಮಾ.21: ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾರ ಜೊತೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ 22 ಶಾಸಕರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲು ಈ 22 ಶಾಸಕರ ರಾಜೀನಾಮೆ ಪ್ರಮುಖ ಪಾತ್ರ ವಹಿಸಿತ್ತು. ಸಿಂಧಿಯಾ ಜೊತೆ ಈ ಶಾಸಕರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರ್ಪಡೆಯಾಗುವ ಆಶಯ ವ್ಯಕ್ತಪಡಿಸಿದ್ದು ಅವರನ್ನು ನಡ್ಡಾ ಪಕ್ಷಕ್ಕೆ ಸ್ವಾಗತಿಸಿದರು.

“ಮಧ್ಯಪ್ರದೇಶದ ಅಭಿವೃದ್ಧಿ ಮತ್ತು ಪ್ರಗತಿಯ ವಾಗ್ದಾನದೊಂದಿಗೆ ನನ್ನ ಮಾಜಿ ಕಾಂಗ್ರೆಸ್ ಸಹೋದ್ಯೋಗಿಗಳಾದ 22 ಮಾಜಿ ಶಾಸಕರು ಈ ದಿನ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ” ಎಂದು ಜ್ಯೋತಿರಾದಿತ್ಯ ಸಿಂದಿಯಾ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News