ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ: ಓರ್ವ ಮೃತ್ಯು

Update: 2020-03-22 18:16 GMT

ಬೆಂಗಳೂರು, ಮಾ.22: ಖಾಲಿ ರಸ್ತೆಯಲ್ಲಿ ಬೌನ್ಸರ್ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಸವಾರನೋರ್ವ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ರಸ್ತೆಯ ಫ್ಲೈಓವರ್ ಬಳಿ ರವಿವಾರ ಸಂಭವಿಸಿದೆ.

ಹಳೆಗುಡ್ಡದಹಳ್ಳಿ ನಿವಾಸಿ 19 ವರ್ಷದ ಗಜೇಂದ್ರ ಮೃತ ಸವಾರ. ಗಂಭೀರವಾಗಿ ಗಾಯಗೊಂಡ 20 ವರ್ಷದ ಯುವಕ ಶಿವಕುಮಾರ್ ಅನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. 

ರವಿವಾರ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ರಸ್ತೆಗಳು ಖಾಲಿ ಇವೆ. ಈ ಖುಷಿಯಲ್ಲಿ ಇಬ್ಬರು ಯುವಕರು ಬೈಕ್ ಮೇಲೆ ಕುಳಿತು ವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News