ಬೆಂಗಳೂರಿಗೆ ವಿದೇಶಿಗರ ಆಗಮನ: ಸುರಕ್ಷಿತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಎಚ್.ಕೆ.ಪಾಟೀಲ್ ಸಲಹೆ

Update: 2020-03-22 18:19 GMT

ಬೆಂಗಳೂರು, ಮಾ.22: ರಾಜ್ಯಕ್ಕೆ ಎರಡು ದಿನದಲ್ಲಿ ಇಟಲಿ ಸೇರಿ ಹೊರ ದೇಶಗಳಿಂದ ಸುಮಾರು 22 ಸಾವಿರ ಮಂದಿ ಬೆಂಗಳೂರಿಗೆ ಬರುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮ ವಹಿಸಿಕೊಳ್ಳಬೇಕು ಎಂದು ರಾಜ್ಯ ಸರಕಾರಕ್ಕೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಸಲಹೆ ಮಾಡಿದ್ದಾರೆ.

ರವಿವಾರ ಟ್ವೀಟ್ ಮಾಡಿರುವ ಅವರು, ವಿದೇಶದಿಂದ ಬಂದವರನ್ನು ಪ್ರತ್ಯೇಕ ನಿಗಾ ವ್ಯವಸ್ಥೆಯಲ್ಲಿ ಇರಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ನಗರದ ಹೋಟೆಲ್‌ಗಳನ್ನು ವಶಪಡಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಸರಕಾರ ಶೀಘ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News