ಕೊರೋನ ವೈರಸ್ ಭೀತಿ: ಡೆತ್ ನೋಟ್ ಬರೆದಿಟ್ಟು ಉಡುಪಿಯ ವ್ಯಕ್ತಿ ಆತ್ಮಹತ್ಯೆ

Update: 2020-03-25 10:16 GMT

ಉಡುಪಿ : ಕೊರೋನ ವೈರಸ್ ಇದೆ ಎಂದು ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಉಪ್ಪೂರಿನ ನರ್ನಾಡು ನಿವಾಸಿ ಗೋಪಾಲಕೃಷ್ಣ ಮಡಿವಾಳ (56) ಎಂದು ಗುರುತಿಸಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ನ ಟ್ರೈನರ್ ಆಗಿದ್ದ ಗೋಪಾಲಕೃಷ್ಣ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News