ಭಟ್ಕಳ : ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತ್ಯು

Update: 2020-03-25 15:32 GMT

ಭಟ್ಕಳ: ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದ ಇಬ್ಬರು ಸಹೋದರರಲ್ಲಿ ಓರ್ವ ಮಹಡಿಯಿಂದ ಕೆಳಗೆ ಬಿದ್ದಿದ್ದು ಆತನನ್ನು ರಕ್ಷಿಸಲು ಯತ್ನಿಸಿದ ಹಿರಿಯ ಸಹೋದರ ಮಹಡಿ ಮೇಲಿನಿಂದ ಹಾದು ಹೋದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ಮೃತಪಟ್ಟ ಘಟನೆ ಕಾರ್ ಸ್ಟ್ರೀಟ್ ನಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಎದುರು ಇಂದು ಸಂಜೆ ನಡೆದಿದೆ.

ಮೃತ ಬಾಲಕನನ್ನು ಮನಿಯಾರ್ ಫಾರೂಕ್ ಎಂಬವರ ಪುತ್ರ ಫಹದ್ ಮನಿಯಾರ್ (18) ಎಂದು ಗುರುತಿಸಲಾಗಿದೆ.

ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಅವರ ಕಿರಿಯ ಪುತ್ರ ಅಂಝಾಫ್ ಮನಿಯಾರ್ (14) ನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News