ಭಟ್ಕಳ : ಸಮುದ್ರದಲ್ಲಿ ಮುಳುಗಿ ಮೃತ್ಯು

Update: 2020-03-25 15:39 GMT

ಭಟ್ಕಳ: ಬಹಿರ್ದೆಸೆಗೆಂದು ಸಮುದ್ರದ ಕಡೆ ಹೋಗಿದ್ದ ವ್ಯಕ್ತಿ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಕಲ್ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೂಲಿ ಕಾರ್ಮಿಕ ಮಂಜುನಾಥ್ ದುರ್ಗಪ್ಪ ನಾಯ್ಕ್ (42) ಎಂದು ಗುರತಿಸಲಾಗಿದೆ.

ಎಂದಿನಂತೆ ಬಹಿರ್ದೆಸೆಗೆಂದು ಮನೆಯ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದ ಈತ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News