ಅಧಿಕ ಬಡ್ಡಿ ವಸೂಲಿ ಆರೋಪ: ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಪತ್ರ
Update: 2020-03-28 11:29 GMT
ಬೆಂಗಳೂರು, ಮಾ. 28: ಕೊರೋನ ಸೋಂಕು ಹರಡುವ ಹಿನ್ನೆಲೆ ಮನೆಯಲ್ಲಿ ಉಳಿದಿರುವ ಜನರ ಬಳಿ ಬಡ್ಡಿ ವಸೂಲಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಈಗಾಗಲೇ ಆರ್ಥಿಕ ವ್ಯವಸ್ಥೆ ವ್ಯತಿರಿಕ್ತವಾಗಿದ್ದು, ಜನರಿಗೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಲ್ಲ ಬ್ಯಾಂಕ್ಗಳ ಮೂರು ತಿಂಗಳ ಇಎಂಐ ಕಟ್ಟದಂತೆ ಆದೇಶ ಹೊರಡಿಸಿದೆ. ಆದರೆ ಬಡ, ಮಧ್ಯಮ ವರ್ಗದವರಿಗೆ ಬಡ್ಡಿ ದಂಧೆಕೋರರು ಕಿರುಕುಳ ಕೊಟ್ಟು ಬಲವಂತವಾಗಿ ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.