ಬೆಂಗಳೂರು: ಕೊರೋನ ವೈರಸ್ ನಿಯಂತ್ರಣಕ್ಕೆ 10 ಕೋಟಿ ರೂ. ನೆರವು ಘೋಷಣೆ

Update: 2020-03-28 15:23 GMT

ಬೆಂಗಳೂರು, ಮಾ.28: ಕೊರೋನ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರದೊಂದಿಗೆ ಕೈ ಜೋಡಿಸಲು ವಿಶ್ವವಿದ್ಯಾಲಯ ಮತ್ತು ಕಾಲೇಜು ಶಿಕ್ಷಕರ ಸಂಘಗಳ ಒಕ್ಕೂಟ 10 ಕೋಟಿ ರೂ. ನೆರವು ಘೋಷಣೆ ಮಾಡಿದೆ.

ಶನಿವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಡಾ.ಬಿ.ಜಿ.ಭಾಸ್ಕರ್, ಕೊರೋನ ತಡೆಗೆ, ಅಗತ್ಯ ಕ್ರಮ ಹಾಗೂ ಅಗತ್ಯ ಸಾಮಗ್ರಿಗಾಗಿ ದೇಣಿಗೆ ನೀಡಲು ಮುಂದೆ ಬಂದಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರೂಪಾಯಿ ನೀಡಲು ನಿರ್ಧಾರ ಮಾಡಲಾಗಿದೆ ಎಂದರು.

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ಸೇರಿ 10 ಸಾವಿರ ಮಂದಿ ಇದ್ದೇವೆ. ಎಲ್ಲರ ಒಂದು ದಿನದ ಸಂಬಳ ನೀಡಲು ನಿರ್ಧಾರ ಮಾಡಿದ್ದೇವೆ. ಒಂದು ದಿನದ ಸಂಬಳ 10 ಕೋಟಿಗೂ ಹೆಚ್ಚಿದೆ. ಅಗತ್ಯ ಬಿದ್ದರೆ ಇನ್ನು ಹೆಚ್ಚಿನ ದೇಣಿಗೆ ನೀಡಲು ನಾವು ತಯಾರಿದ್ದೇವೆ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News