ವಿಜಯ ಕರ್ನಾಟಕದ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ: ಉಡುಪಿ ಜಿಲ್ಲಾ ಸುನ್ನೀ ಸಂಘಟನೆ

Update: 2020-03-28 15:51 GMT

ಉಡುಪಿ, ಮಾ.28: ಕೊರೋನಾ ವಿಚಾರವನ್ನು ಕೋಮುವಾದೀಕರಣ ಮಾಡಲು ಹೊರಟಿರುವ ‘ವಿಜಯ ಕರ್ನಾಟಕ’ ಪತ್ರಿಕೆಯ ಕ್ರಮವನ್ನು ಉಡುಪಿ ಜಿಲ್ಲಾ ಸುನ್ನೀ ಸಂಘಟನೆ ತೀವ್ರವಾಗಿ ಖಂಡಿಸಿದೆ.

ಮನುಷ್ಯನ ಧರ್ಮ ನೋಡಿ ಈ ವೈರಸ್ ಹರಡುತ್ತಿಲ್ಲ. ಕೆಲವರ ಕೋಮು ಮನಸ್ಥಿತಿ ಈ ಕೊರೋನವನ್ನು ಕೋಮುವಾದೀಕರಣ ಮಾಡಲು ಹೊರಟಿದೆ. ಸತ್ತವರೆಲ್ಲಾ ಒಂದೇ ಸಮುದಾಯದವರು ಎಂಬುದಾಗಿ ವಿಜಯ ಕರ್ನಾಟಕ ಪತ್ರಿಕೆ ಪ್ರಕಟಿಸಿದೆ. ಈ ಮಾರಕ ರೋಗದಲ್ಲೂ ಜಾತಿವಾದ ತೋರಿದ ಪತ್ರಿಕೆಯ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್, ಜಿಲ್ಲಾ ಸಂಯುಕ್ತ ಜಅಮಾತ್, ಎಸ್ಸೆಸ್ಸೆಫ್‌ನ ಮುಖಂಡ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News