ಕಾಂಗ್ರೆಸ್ ಸಂಸದರಿಂದ ಎರಡು ಕೋಟಿ ರೂ.ದೇಣಿಗೆ

Update: 2020-03-28 17:02 GMT

ಬೆಂಗಳೂರು, ಮಾ.28: ಕೋವಿಡ್-19ನ ಪರೀಕ್ಷೆ ಮತ್ತು ಅದಕ್ಕೆ ಸಂಬಂಧಿಸಿದ ಉಪಕರಣಗಳನ್ನು ಖರೀದಿಸಲು ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್ ಹಾಗೂ ಡಾ.ಸೈಯ್ಯದ್ ನಾಸೀರ್ ಹುಸೇನ್ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ ಒಂದು ಕೋಟಿ ರೂ.ಗಳನ್ನು ನೀಡುವುದಾಗಿ ಪ್ರಕಟಿಸಿದ್ದಾರೆ.

ಬೆಂಗಳೂರಿನ ಸರಕಾರಿ ಆಸ್ಪತ್ರೆಗಳಲ್ಲಿ ಕೊರೋನ ಚಿಕಿತ್ಸೆಗೆ ಬೇಕಾದ ಉಪಕರಣಗಳ ಖರೀದಿಸುವಂತೆ ಸೂಚಿಸಿ ಬೆಂಗಳೂರು ಜಿಲ್ಲಾಧಿಕಾರಿಗೆ ಜಿ.ಸಿ.ಚಂದ್ರಶೇಖರ್ ಹಾಗೂ ಬಳ್ಳಾರಿ ಜಿಲ್ಲೆಗೆ ಅಗತ್ಯವಿರುವ ಆರೋಗ್ಯ ಸೌಕರ್ಯ ಬಲಪಡಿಸಲು ಅನುದಾನವನ್ನು ಬಳಕೆ ಮಾಡಿಕೊಳ್ಳುವಂತೆ ನಾಸೀರ್ ಹುಸೇನ್ ಬಳ್ಳಾರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News