ಸರಕಾರದ ಹೋರಾಟಕ್ಕೆ ಕೈಜೋಡಿಸಿ: ಆರ್.ವಿ.ದೇಶಪಾಂಡೆ ಮನವಿ

Update: 2020-03-28 17:16 GMT

ಬೆಂಗಳೂರು, ಮಾ.28: ಕೊರೋನ ನಿಯಂತ್ರಣಕ್ಕೆ ರಾಜ್ಯ ಸರಕಾರ ಹಲವು ಕ್ರಮಗಳಿಗೆ ಮುಂದಾಗಿದ್ದು, ಅವರೊಂದಿಗೆ ಶಾಸಕರು, ಸ್ಥಿತಿವಂತರು ಕೈಜೋಡಿಸಬೇಕೆಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ.

ಕೊರೋನ ವೈರಸ್(ಕೋವಿಡ್-19) ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಈ ಸೋಂಕಿಗೆ ಭಾರತವೂ ಹೊರತಾಗಿಲ್ಲ. ದೇಶದ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಂತುಹೋಗಿದ್ದು, ಕಾರ್ಮಿಕರು, ದಿನಗೂಲಿ ನೌಕರರು, ಕಾರ್ಮಿಕರು ಸಂಬಳವಿಲ್ಲದೆ ದಿನನಿತ್ಯದ ಜೀವನ ಸಾಗಿಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದಿನನಿತ್ಯದ ಜೀವನಕ್ಕೆ ಬಹುದೊಡ್ಡ ಹೊಡೆತ ಬಿದ್ದಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಅವರ ಜೊತೆಗಿದ್ದೇವೆ ಎಂಬ ಭರವಸೆ ಮೂಡಸಬೇಕಾಗಿದೆ. ಹೀಗಾಗಿ ಜನಪ್ರತಿನಿಧಿಗಳು ಹಾಗೂ ಸಮಾಜದಲ್ಲಿನ ಸ್ಥಿತಿವಂತರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಹಾಸ ಹಸ್ತ ಮಾಡಬೇಕಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News