ಅರ್ಚಕರಿಗೆ ಹಲ್ಲೆ ಪ್ರಕರಣ: ಗೃಹರಕ್ಷಕ ಸಿಬ್ಬಂದಿ ಅಮಾನತು

Update: 2020-03-30 07:36 GMT
ಹಲ್ಲೆಗೊಳಗಾದ ಅರ್ಚಕ ಶ್ರೀನಿವಾಸ್ ಭಟ್

ಮಂಗಳೂರು, ಮಾ.30: ಆದಿ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಶ್ರೀನಿವಾಸ್ ಭಟ್ ಮೇಲೆ ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಗೃಹರಕ್ಷಕ ಸಿಬ್ಬಂದಿ ವೀಕೇಶ್ ಎಂಬವರನ್ನು ಅಮಾನತುಗೊಳಿಸಿ ಗೃಹರಕ್ಷಕ ದಳದ ಕಮಾಂಡೆಂಟ್ ಮುರಳಿ ಮೋಹನ್  ಚೂಂತಾರು ಆದೇಶಿಸಿದ್ದಾರೆ.

ಅರ್ಚಕನಿಗೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಪೊಲೀಸ್ ಸಿಬ್ಬಂದಿ ಶಂಕರ್‌ ರನ್ನು ಈಗಾಗಲೆ ಜಿಲ್ಲಾ ಎಸ್ಪಿ ಅಮಾನತುಗೊಳಿಸಿದ್ದರು. ಇದೀಗ ಗೃಹರಕ್ಷಕ ದಳದ ಘಟಕಾಧಿಕಾರಿಯ ಶಿಫಾರಸಿನ ಮೇರೆಗೆ ವಿಕೇಶ್‌ ರನ್ನು ಅಮಾನತುಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News