ಕ್ವಾರಂಟೈನ್ ಆದೇಶ ಉಲ್ಲಂಘನೆ: ರಾಜ್ಯದೆಲ್ಲೆಡೆ 50 ಪ್ರಕರಣ ದಾಖಲು

Update: 2020-03-30 11:56 GMT

ಬೆಂಗಳೂರು, ಮಾ.30: ಕೊರೋನ ಸೋಂಕು ಸಂಬಂಧ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ  50 ಕ್ಕೂ ಹೆಚ್ಚಿನ ಪ್ರಕರಣಗಳು ರಾಜ್ಯದ ಹಲವೆಡೆ ದಾಖಲಾಗಿವೆ.

ಬೆಂಗಳೂರು, ಮೈಸೂರು, ತುಮಕೂರು, ಬಳ್ಳಾರಿ, ರಾಯಚೂರು, ರಾಮನಗರ, ಚಿಕ್ಕ ಬಳ್ಳಾಪುರ, ಮಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆಗಳಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಂಧನ: ವಿಜಯಪುರ  ಜಿಲ್ಲೆಯ ನಾಗಠಾಣ ಗ್ರಾಮದ 5 ಮಂದಿಗೆ ಕೋವಿಡ್-19 ಪಾಸಿಟಿವ್ ಇದೆ ಎಂದು ಯುವಕನೊಬ್ಬ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿ ಸುಳ್ಳು ಸುದ್ದಿ ಹಬ್ಬಿಸಿರುವುದು ಬೆಳಕಿಗೆ ಬಂದಿದೆ. ಪ್ರಕಾಶ್ ಚವ್ಹಾಣ ತನ್ನ ಫೇಸ್‍ಬುಕ್‍ನಲ್ಲಿ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹಜ್ ಯಾತ್ರೆಗೆ ತೆರಳಿದ್ದ 15 ಮಂದಿಯ ಪೈಕಿ ಐವರಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಪೋಸ್ಟ್ ಹಾಕಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಆತನನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News