ಭದ್ರತಾ ವೈಫಲ್ಯ: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು

Update: 2020-03-30 17:44 GMT

ಹೊಸದಿಲ್ಲಿ, ಮಾ.30: ಗಂಭೀರ ಭಧ್ರತಾ ವೈಫಲ್ಯ ಕಾರಣಕ್ಕಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಗೃಹ ವ್ಯವಹಾರ ಸಚಿವಾಲಯ ಅಮಾನತುಗೊಳಿಸಿದೆ.

ದೇಶಾದ್ಯಂತ ಜಾರಿಗೊಳಿಸಲಾದ 21 ದಿನಗಳ ಲಾಕ್ ಡೌನ್ ಸೋಮವಾರ ಆರನೇ ದಿನಕ್ಕೆ ಕಾಲಿರಿಸಿದ್ದು, ಈ ಅವಧಿಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಒದಗಿಸಲು ವಿಫಲರಾದ ಇತರ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ಸಾರಿಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ , ಹಣಕಾಸು ಇಲಾಖೆಯ ಮುಖ್ಯ ಕಾರ್ಯದರ್ಶಿ ಮತ್ತು ವಿಭಾಗೀಯ ಆಯಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಇದೇ ವೇಳೆ ಗೃಹ ಮತ್ತು ಭೂಮಿ ಹಾಗೂ ಕಟ್ಟಡ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಸೀಲಾಂಪುರ ಉಪ ವಿಭಾಗೀಯ ದಂಡಾಧಿಕಾರಿ ಅವರಿಗೆ ಗೃಹ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News