ಉಡುಪಿ ಜಿಲ್ಲೆಯಲ್ಲಿ ಸುವ್ಯವಸ್ಥಿತ ಪಡಿತರ ವಿತರಣೆಗೆ ಕ್ರಮ: ಜಿ.ಜಗದೀಶ್

Update: 2020-03-31 17:46 GMT

ಉಡುಪಿ, ಮಾ.31: ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾದ್ಯಂತ ನಿಬರ್ಂಧಕಾಜ್ಞೆ ಜಾರಿಯಲ್ಲಿರುವುದರಿಂದ ರಾಜ್ಯ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೋವಿಡ್-19 ಸಭೆಯಲ್ಲಿ ನೀಡಿರುವ ನಿರ್ದೇಶನದಂತೆ ಎಪ್ರಿಲ್ ಹಾಗೂ ಮೇ ತಿಂಗಳ ಪಡಿತರವನ್ನು ನಾಳೆಯಿಂದ ವಿತರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಜಿಲ್ಲೆಯ ಅಂತ್ಯೋದಯ/ಬಿಪಿಎಲ್ ಪಡಿತರ ಚೀಟಿದಾರರಿಗೆ ಎ.1ರಿಂದ ಜಿಲ್ಲೆಯಲ್ಲಿರುವ ಎಲ್ಲಾ ಒಟ್ಟು 292 ಸೊಸೈಟಿ /ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಮಾಡಲಾಗುವುದು. ಈ ವೇಳೆ ಕೆಳಗಿನ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ವಿತರಕರಿಗೆ ತಿಳಿಸಿದ್ದಾರೆ.

ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿಯ ಲೆಕ್ಕದಲ್ಲಿ ಪ್ರತಿ ದಿನ 50ರಿಂದ 100 ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ನೀಡುವ ಬಗ್ಗೆ ಮುಂಚಿತವಾಗಿ ಬೇರೆ ಬೇರೆ ಸಮಯ ನಿಗದಿಪಡಿಸಿ ದೂರವಾಣಿಗಳ ಮೂಲಕ ಸಂದೇಶ ನೀಡಬೇಕು. ಈ ಮೂಲಕ ಪಡಿತರ ವಿತರಣೆ ವೇಳೆ ಜನ ಸಂದಣಿ ಯಾಗದಂತೆ ನೋಡಿಕೊಳ್ಳಬೇಕು.

ಹೊರ ಜಿಲ್ಲೆಯ ಪಡಿತರ ಚೀಟಿದಾರರಿಗೆ- ಪೋರ್ಟೇಬಿಲಿಟಿ- ವ್ಯವಸ್ಥೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ವಿತರಿಸಬೇಕು. ಪಡಿತರ ವಿತರಣೆಯ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳಲು ನ್ಯಾಯಬೆಲೆ ಅಂಗಡಿ ಮುಂಭಾಗದಲ್ಲಿ ಗುರುತುಗಳನ್ನು ಮಾಡುವುದ ರೊಂದಿಗೆ, ಪಡಿತರವನ್ನು ತೆಗೆದುಕೊಳ್ಳಲು ಬರುವವರಿಗೆ ಸ್ಯಾನಿಟೈಜರ್ಸ್/ಸಾಬೂನು ಮತ್ತು ನೀರಿನ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಆಯಾ ತಾಲೂಕುಗಳ ತಹಶೀಲ್ದಾರ್‌ಗಳು ಹೆಚ್ಚಿನ ಗಮನಹರಿಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಸುರಕ್ಷತೆಯ ದೃಷ್ಠಿಯಿಂದ ಇವುಗಳನ್ನು ಪರಿಶೀಲಿಸಲು ಓರ್ವ ಅಧಿಕಾರಿುನ್ನು ನೇಮಿಸುವಂತೆ ತಿಳಿಸಲಾಗಿದೆ.

ಪಡಿತರ ವಿತರಣೆಯ ಸಮಯದಲ್ಲಿ ಓಟಿಪಿ ಬರದೇ ಇದ್ದಲ್ಲಿ ಅದಕ್ಕೆ ಕಾಯದೆ ರಿಜಿಸ್ಟರ್‌ನಲ್ಲಿ ಹೆಸರು ನೊಂದಾಯಿಸಿ ಪಡಿತರ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಪಡಿತರ ನೀಡುವಾಗ ವಿಳಂಬವಾಗದಂತೆ ನೋಡಿ ಕೊಳ್ಳಬೇಕು. ಈ ವೇಳೆ ಕೋವಿಡ್-19 ಸೋಂಕು ಹರಡುವಿಕೆ ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೀಡಿರುವ ಎಲ್ಲಾ ಸೂಚನೆಗಳು ಹಾಗೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದಲ್ಲಿ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳಲಾಗುವುದು.

ಯಾವುದೇ ಕಾರಣಕ್ಕೂ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆ ಯಾಗದಂತೆ ಕ್ರಮವಹಿಸಿ ಸಮನ್ವಯ ಸಾಧಿಸಲು ಆಯಾ ತಾಲೂಕು ಗಳಿಗೆ ಸಂಬಂಧಪಟ್ಟ ತಹಶೀಲ್ದಾರ್‌ಗಳಿಗೆ ಸೂಚಿಸಲಾಗಿದೆ. ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲೂ ಪಡಿತರ ವಿತರಣೆಯ ವೇಳೆ ಮೇಲಿನ ಎಲ್ಲಾ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News