ಸರಕಾರ ದೃಢೀಕರಿಸದ ಮಾಹಿತಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲು ಸುಪ್ರೀಂಗೆ ಕೇಂದ್ರ ಮನವಿ

Update: 2020-03-31 18:30 GMT

ಹೊಸದಿಲ್ಲಿ: ಸರಕಾರ ದೃಢೀಕರಿಸದ ಕೊರೋನ ವೈರಸ್ ಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಮಾಧ್ಯಮಗಳು ಮುದ್ರಿಸುವುದಕ್ಕೆ , ಪ್ರಕಟಿಸುವುದಕ್ಕೆ ಮತ್ತು ಪ್ರಸಾರ ಮಾಡುವುದಕ್ಕೆ ನಿರ್ಬಂಧ ಹೇರಬೇಕೆಂದು ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಕೊರೋನ ನಿಯಂತ್ರಣಕ್ಕಾಗಿ ಲಾಕ್ ಡೌನ್ ಹೇರಿದ ನಂತರ ವಲಸೆ ಕಾರ್ಮಿಕರಿಗಾಗಿ ಕೈಗೊಂಡ ಕ್ರಮಗಳ ಕುರಿತ ಅರ್ಜಿಗಳಿಗೆ ಸಂಬಂಧಿಸಿ ನೀಡಲಾಗಿದ್ದ ಸ್ಥಿತಿಗತಿ ವರದಿಯಲ್ಲಿ ಕೇಂದ್ರ  ಸರಕಾರ ಈ ಮನವಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ ಕೊರೋನ ವೈರಸ್ ಕುರಿತ ಬೆಳವಣಿಗೆಗಳ ಬಗ್ಗೆ ಅಧಿಕೃತ ಮಾಹಿತಿಗಳನ್ನು 'ಉಲ್ಲೇಖಿಸಲು ಮತ್ತು ಪ್ರಕಟಿಸಲು' ಮಾಧ್ಯಮಗಳಿಗೆ ನಿರ್ದೇಶನ ನೀಡಿತು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News