ನಿಝಾಮುದ್ದೀನ್ ಮಸೀದಿ ಕಾರ್ಯಕ್ರಮದಲ್ಲಿ ರಾಜ್ಯದ 54 ಮಂದಿ ಭಾಗಿ: ಶ್ರೀರಾಮುಲು

Update: 2020-03-31 18:43 GMT

ಬೆಂಗಳೂರು, ಮಾ.31: ನಿಝಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರ ಸಂಖ್ಯೆ 54 ಎಂಬುದು ಖಚಿತವಾಗಿದೆ. ಇವರು ಬೆಂಗಳೂರು, ಬೀದರ್, ಗುಲ್ಬರ್ಗ, ಬಳ್ಳಾರಿ ಭಾಗದವರು ಎಂದು ತಿಳಿದು ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ನಿಝಾಮುದ್ದೀನ್ ಜಮಾತ್ ಮಸೀದಿಯಲ್ಲಿ ಭಾಗವಹಿಸಿದ 26 ವ್ಯಕ್ತಿಗಳು ಬೀದರ್ ಜಿಲ್ಲೆಗೆ ಸೇರಿದವರಾಗಿದ್ದು, ಅವರನ್ನು ಕೂಡಲೆ ಕ್ವಾರಂಟೈನ್ ಮಾಡಲಾಗಿದೆ. ಉಳಿದವರ ಪತ್ತೆ ಹಚ್ಚುವ ಕಾರ್ಯವನ್ನು ಮುಂದುವರೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೆ 13 ಜನರ ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ. ಕೋವಿಡ್-19 ಸೋಂಕು ತಪಾಸಣೆಗಾಗಿ ಕಫ ಪರೀಕ್ಷೆ ನಡೆಸಿದ್ದು, ಈಗ ನೆಗೆಟಿವ್ ಎಂದು ವರದಿ ಬಂದಿದೆ. ಇದು ಸಮಾಧಾನದ ಸಂಗತಿ. ಉಳಿದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News