ವಲಸಿಗರಲ್ಲಿ 10ರಲ್ಲಿ 3 ಮಂದಿಗೆ ಕೊರೋನ ವೈರಸ್ ಸೋಂಕು: ಸುಪ್ರೀಂಗೆ ಕೇಂದ್ರದ ಮಾಹಿತಿ
Update: 2020-03-31 18:59 GMT
ಹೊಸದಿಲ್ಲಿ, ಮಾ.31:ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ತೆರಳುವ 10 ಜನರಲ್ಲಿ 3 ಮಂದಿ ಕೊರೋನ ವೈರಸ್ ಸೋಂಕಿತರಾಗಿರುವ ಸಾಧ್ಯತೆಯಿದೆ ಎಂದು ಕೇಂದ್ರ ಮಂಗಳವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಮತ್ತು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠಕ್ಕೆ ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಾಹಿತಿ ನೀಡಿದರು.
ವೈರಸ್ ಹೊತ್ತ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ 10ರಲ್ಲಿ 3 ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಮೆಹ್ತಾ ನ್ಯಾಯಪೀಠದ ಮುಂದೆ ವಾದ ಮಂಡಿಸಿದರು.