ದಿಲ್ಲಿ ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದ.ಕ. ಜಿಲ್ಲೆಯ ಇಬ್ಬರಿಗೆ ಆಸ್ಪತ್ರೆಯಲ್ಲೇ ಕ್ವಾರಂಟೈನ್
Update: 2020-04-01 05:58 GMT
ಮಂಗಳೂರು, ಎ.1: ದಿಲ್ಲಿಯ ಮರ್ಕಝ್ ನಿಝಾಮುದ್ದೀನ್ನ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆನ್ನಲಾದ ದ.ಕ. ಜಿಲ್ಲೆಯ ಇಬ್ಬರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿಡಲಾಗಿದೆ.
ಈ ಪೈಕಿ ಒಬ್ಬರು ತೊಕ್ಕೊಟ್ಟು ಸಮೀಪದ ಪಿಲಾರ್ ನಿವಾಸಿಯಾಗಿದ್ದಾರೆ. ಇವರು ದಿಲ್ಲಿಯ ಮರ್ಕಝ್ ನಿಝಾಮುದ್ದೀನ್ನ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಲ್ಲದೆ, ಇದಕ್ಕೂ ಮುನ್ನ ವಿದೇಶಕ್ಕೂ ತೆರಳಿ ವಾಪಸ್ ಆಗಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಇವರಿಬ್ಬರಲ್ಲೂ ಯಾವುದೇ ಅನಾರೋಗ್ಯದ ಲಕ್ಷಣಗಳಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ನಲ್ಲಿ ಕ್ವಾರಂಟೈನ್ ಇಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಇಬ್ಬರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿ ಕೊಡಲಾಗಿದ್ದು, ಗುರುವಾರ ವರದಿ ಬರಲಿದೆ ಎಂದವರು ಮಾಹಿತಿ ನೀಡಿದ್ದಾರೆ.