ಪಿಂಚಣಿ ನಿಧಿಯ ಉಳಿತಾಯದಿಂದ 1.25 ಲಕ್ಷ ರೂ. ದೇಣಿಗೆ ನೀಡಿದ 86 ವರ್ಷದ ನಿವೃತ್ತ ಶಿಕ್ಷಕಿ

Update: 2020-04-01 07:03 GMT

ಬೆಂಗಳೂರು, ಎ.1: ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ 86 ಪ್ರಾಯದ ನಿವೃತ್ತ ಶಿಕ್ಷಕಿಯೊಬ್ಬರು ಕೊರೋನ ವೈರಸ್‌ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಲಕ್ಷ ರೂ. ದೇಣಿಗೆಯಾಗಿ ನೀಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಯೂ ಆಗಿರುವ ಜಿ.ಜಯಲಕ್ಷಮ್ಮ ತಮ್ಮ ಪಿಂಚಣಿ ನಿಧಿಯಲ್ಲಿ ಉಳಿತಾಯ ಮಾಡಿದ್ದ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿ, ಮಾನವೀಯತೆ ಮರೆದಿದ್ದಾರೆ‌.

ಮಲ್ಲೇಶ್ವರಂ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಜಿ.ಜಯಲಕ್ಷಮ್ಮ 1992ನೇ ಸಾಲಿನ ಅಕ್ಟೋಬರ್ ನಲ್ಲಿ ನಿವೃತ್ತಿ ಹೊಂದಿದ್ದಾರೆ. ಸತತ ಮೂವತ್ತು ವರ್ಷಗಳ ಕಾಲ ಅವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅಂದಿನಿಂದ ಪಿಂಚಣಿಯಲ್ಲಿ ಉಳಿತಾಯ ಮಾಡಿದ್ದ ಹಣವನ್ನು ದೇಣಿಗೆ ನೀಡಿದ್ದಾರೆ.

ಈ‌ ಕುರಿತು 'ವಾರ್ತಾಭಾರತಿ' ಯೊಂದಿಗೆ ಮಾತನಾಡಿದ ಜಿ.ಜಯಲಕ್ಷಮ್ಮ, ಇಡೀ ವಿಶ್ವವನ್ನೇ ಕೊರೊನ ವೈರಸ್‌ ಆವರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಕೋವಿಡ್‌-19 ಸೋಂಕು ವಿರುದ್ಧ ಹೋರಾಡುತ್ತಿದ್ದಾರೆ. ಮಾರಣಾಂತಿಕ ವೈರಸ್‌ ವಿರುದ್ಧ ಜಾಗೃತರಾಗಿ ಹಾಗೂ ಆರೋಗ್ಯ ಸಂಸ್ಥೆಗಳು ನೀಡಿರುವ ಸೂಚನೆಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಕೂಡ ನಮ್ಮ ಕೈಲಾದಷ್ಟು ಸಹಾಯ ಮಾಡಲು ಮುಂದಾದ್ದೇವು ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News