ಮಂಗಳೂರು: ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಸೋಂಕು ನಿವಾರಕ ಔಷಧ ಸಿಂಪಡಣೆ

Update: 2020-04-01 08:48 GMT

ಮಂಗಳೂರು, ಎ.1: ಕೊರೋನ ಸೋಂಕು ಹರಡದಂತೆ ತಡೆಯಲು ನಗರದ ಕಾರ್ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಔಷಧ ಸಿಂಪಡಣೆ ಮಾಡಲಾಯಿತು.

ಸೇವಂಜಾಲಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಟ್ರಸ್ಟ್ ಅಧ್ಯಕ್ಷ ಸದಸ್ಯರು ಸೇರಿಕೊಂಡು, ಗ್ಲೌಸ್, ಮಾಸ್ಕ್ ಧರಿಸಿಕೊಂಡು, ಸೋಡಿಯಂ ಹೈಪೊಕ್ಲೋರೈಡ್, ಫಿನಾಯಿಲ್‌ ಮತ್ತು ಬ್ಲೀಚಿಂಗ್‌ ಮಿಶ್ರಣವನ್ನು ಔಷಧ ವಾಹನದ ಮೂಲಕ ದೇವಸ್ಥಾನ ಮತ್ತು ಅಂಗಡಿಗಳ ಮುಂದೆ ಸಿಂಪಡಣೆ ಮಾಡಿದರು.

 ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಿ.ವೇದವ್ಯಾಸ ಕಾಮತ್ ಮಾರ್ಗದರ್ಶನದಂತೆ, ಔಷಧ ಸಿಂಪಡನೆಯಲ್ಲಿ ಕಾರ್ಯದರ್ಶಿ ಹನುಮಂತ ಕಾಮತ್, ಆಲ್ ಇಂಡಿಯಾ ಟೆಂಪಲ್ ಅಸೋಸಿಯೇಷನ್ ಅಧ್ಯಕ್ಷ ಜಗನ್ನಾಥ ಕಾಮತ್, ಪ್ರಶಾಂತ್ ರಾವ್, ಸದಸ್ಯರುಗಳಾದ ನರೇಶ್ ಶೆಣೈ, ವರದರಾಜ್ ಶೆಣೈ, ಸಂತೋಷ್ ಭಂಡಾರಿ, ನರೇಶ್ ಪ್ರಭು, ಚೇತನ್ ಕಾಮತ್, ಸಂತೋಷ್ ಶೆಣೈ, ದೀಪಕ್ ಮಲ್ಯ, ನರಹರಿ ಭಟ್  ಮತ್ತಿತರರು ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News