ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಯಾರೂ ಪಾಲ್ಗೊಂಡಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

Update: 2020-04-01 09:43 GMT

ಚಿಕ್ಕಮಗಳೂರು, ಎ.1: ದಿಲ್ಲಿಯ ನಿಝಾಮುದ್ದೀನ್ ಮರ್ಕಝ್ ನಲ್ಲಿ ನಡೆದ ಸಭೆಯಲ್ಲಿ ಚಿಕ್ಕಮಗಳೂರಿನಿಂದ ಭಾಗವಹಿಸಿದವರು ಯಾರೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಝಾಮುದ್ದೀನ್ ಸಭೆ ನಡೆದ ದಿನದಂದು ಚಿಕ್ಕಮಗಳೂರಿನ ಐವರು ದಿಲ್ಲಿಯಲ್ಲಿದ್ದರು. ಆದರೆ ಅವರು ಸಭೆಯಲ್ಲಿ ಭಾಗವಹಿಸಿಲ್ಲ. ದಿಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಈ ಐವರು ತಿರುಗಾಡಿದ್ದು, ರೈಲ್ವೇ ನಿಲ್ದಾಣದಿಂದ ಸಭೆ ನಡೆದ ನಿಝಾಮುದ್ದೀನ್ ಮರ್ಕಝ್ 250 ಮೀಟರ್ ದೂರದಲ್ಲಿದೆ ಎಂದು ಅವರು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಐವರು ಸಭೆಯಲ್ಲಿ ಭಾಗವಹಿಸಿಲ್ಲ ಎಂಬುದು ತನಿಖೆಯಿಂದ ಸ್ಪಷ್ಟವಾಗಿದೆ. ಆದರೂ ಮನ್ನೆಚ್ಚರಿಕೆ ಕ್ರಮವಾಗಿ ಈ ಐವರನ್ನೂ ಹೋಮ್ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ. ಐವರೂ ಸೇರಿದಂತೆ ಅವರ ಕುಟುಂಬಸ್ಥರಿಗೂ ಮನೆ ಬಿಟ್ಟು ಹೊರ ಬಾರದಂತೆ ಸೂಚನೆ ನೀಡಲಾಗಿದ್ದು, ಐವರಲ್ಲೂ ಸೋಂಕಿನ ಲಕ್ಷಣವಿಲ್ಲ ಎಂದವರು ಹೇಳಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News