ರೋಗಕ್ಕೆ ಜಾತಿ-ಧರ್ಮಗಳಿಲ್ಲ, ಒಂದಾಗಿರೋಣ: ಮಾಜಿ ಸಿಎಂ ಸಿದ್ದರಾಮಯ್ಯ

Update: 2020-04-01 11:20 GMT

ಬೆಂಗಳೂರು, ಎ.1: ರೋಗಕ್ಕೆ ಜಾತಿ-ಧರ್ಮಗಳಿಲ್ಲ. ಇದನ್ನು ಜಾತಿ-ಧರ್ಮದ ಪೂರ್ವಗ್ರಹಗಳಿಲ್ಲದೆಯೇ ಎದುರಿಸಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೋನ ವಿರುದ್ಧ ದೇಶ ಒಂದಾಗಿ ನಡೆಸುತ್ತಿರುವ ಹೋರಾಟಕ್ಕೆ ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಸಂಕಷ್ಟದ ಗಳಿಗೆಯಲ್ಲಿ ಒಂದಾಗಿರೋಣ, ಎಚ್ಚರವಾಗಿರೋಣ ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News