ದಾನಿಗಳು ಆಹಾರ ಧಾನ್ಯ,ದಿನಬಳಕೆಯ ವಸ್ತುಗಳನ್ನು ತಾಲೂಕಿನ ತಹಶೀಲ್ದಾರ್ ಕಚೇರಿಗೆ ನೀಡಿ: ಉಡುಪಿ ಡಿಸಿ

Update: 2020-04-01 13:16 GMT

ಉಡುಪಿ, ಎ.1: ನೋವೆಲ್ ಕೊರೋನ ವೈರಸ್ (ಕೋವಿಡ್-19)ಗೆ ಸಂಬಂಧಿಸಿದಂತೆ ಸೋಂಕು ಹರಡುವುದನ್ನು ತಡೆಯಲು ಜಿಲ್ಲಾ ವ್ಯಾಪ್ತಿಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಆರ್‌ಪಿಸಿ ಸೆಕ್ಷನ್ 144(3) ರಂತೆ ನಿಬರ್ಂಧ ವಿಧಿಸಿ ಆದೇಶವನ್ನು ಹೊರಡಿಸಲಾಗಿದ್ದು, ಇದರಿಂದ ಜಿಲ್ಲೆಯಾದ್ಯಂತ ನಾಗರಿಕರ ಸಂಚಾರ ನಿರ್ಬಂಧಿತವಾಗಿದೆ.

ಹೀಗಾಗಿ ಸಂಕಷ್ಟಕ್ಕೆ ಸಿಲುಕಿರುವ ಕೆಲವೊಂದು ವಲಸೆ ಕಾರ್ಮಿಕರ/ಕೂಲಿ ಕಾರ್ಮಿಕರ ವಾಸ್ತವ್ಯಕ್ಕಾಗಿ ತಾತ್ಕಾಲಿಕ ಶೆಲ್ಟರ್‌ರೂಂಗಳನ್ನು ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿದೆ. ಅಲ್ಲದೇ ನಿರ್ಬಂಧದಿಂದಾಗಿ ಇವರಿಗೆ ದಿನಬಳಕೆ ವಸ್ತುಗಳನ್ನು ಪಡೆಯುವಲ್ಲಿ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ವಿತರಿಸಲು ಕೆಲವೊಂದು ಸಂಘ ಸಂಸ್ಥೆಗಳು/ ವ್ಯಕ್ತಿಗಳು ಸ್ವಇಚ್ಛೆಯಿಂದ ಜಿಲ್ಲಾಡಳಿತಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳನ್ನು ನೀಡಲು ಜಿಲ್ಲಾ ಕಛೇರಿಗೆ ಆಗಮಿಸುತಿದ್ದಾರೆ.

ಈ ದೈನಂದಿನ ದಿನಸಿ ಸಾಮಾಗ್ರಿಗಳನ್ನು ಎಲ್ಲಿ ನೀಡಬೇಕು ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅನೇಕ ಗೊಂದಲಗಳಿದ್ದು, ಇಂಥ ಸಾಮಾಗ್ರಿಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪಡೆದಲ್ಲಿ ಸಾಮಾಗ್ರಿಗಳು ಒಂದೇ ಕಡೆಯಲ್ಲಿ ಶೇಖರಣೆಗೊಳ್ಳುವ ಸಂಭವಲಿದೆ. ಹೀಗಾಗಿ ಈ ವ್ಯವಸ್ಥೆಯಲ್ಲಿ ಏಕರೂಪತೆಯನ್ನು ಕಾಯ್ದುಕೊಳ್ಳಲು ಹಾಗೂ ಕ್ಲಪ್ತ ಸಮಯದಲ್ಲಿ ಅಗತ್ಯವಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ತಲುಪಿಸಲು ಮತ್ತು ಈ ವ್ಯವಸ್ಥೆ ದುರುಪಯೋಗವಾಗದಂತೆ ಕ್ರಮ ವಹಿಸಬೇಕಾದ ಅಗತ್ಯವಿದೆ.

ಆದುದರಿಂದ ಆಹಾರ ಧಾನ್ಯಗಳು/ಆಹಾರ ಧಾನ್ಯ ಕಿಟ್/ ದಿನಬಳಕೆ ಅಗತ್ಯ ವಸ್ತುಗಳನ್ನು ನೀಡಲು ಇಚ್ಛಿಸುವ ದಾನಿಗಳು/ಸಂಘ ಸಂಸ್ಥೆಗಳು/ಸಾರ್ವಜನಿಕರು ಆಯಾ ತಾಲೂಕಿನ ತಹಶೀಲ್ದಾರರಿಗೆ ಬೆಳಗ್ಗೆ 10:00 ಗಂಟೆಯಿಂದ ಅಪರಾಹ್ನ 1:00ಗಂಟೆಯವರೆಗೆ ಹಸ್ತಾಂತರಿಸಲು ಕೋರಲಾಗಿದೆ. ಅಲ್ಲದೇ, ಮುಖ್ಯಮಂತ್ರಿ ಗಳ ಪರಿಹಾರನಿಧಿ/ಪ್ರಧಾನಮಂತ್ರಿಯವರ ಪರಿಹಾರನಿಧಿಗೆ ದೇಣಿಗೆ ನೀಡಲು ಇಚ್ಛಿಸುವ ದಾನಿಗಳು/ಸಂಘಸಂಸ್ಥೆಗಳು/ಸಾರ್ವಜನಿಕರು ಚೆಕ್‌ಗಳನ್ನು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಸ್ತಾಂತರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News