ದ.ಕ ಜಿಲ್ಲೆ: ಎ.2 ರಂದು ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ

Update: 2020-04-01 14:45 GMT

ಮಂಗಳೂರು, ಎ.1: ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ವಸ್ತುಗಳ ಖರೀದಿಗಾಗಿ ಎ.2ರಂದು ಬೆಳಗ್ಗೆ 7ರಿಂದ 12 ಗಂಟೆಯವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ದ.ಕ.ಜಿಲ್ಲಾಡಳಿತ ಪ್ರಕಟನೆಯಲ್ಲಿ ತಿಳಿಸಿದೆ.

ಸಾರ್ವಜನಿಕರ ಓಡಾಟ ಮತ್ತು ವ್ಯಾಪಾರ ವಹಿವಾಟು ನಿರ್ಬಂಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವದಂತಿ ಹಾಗೂ ಪೊಲೀಸ್ ಆಯುಕ್ತರ ಹಿಂದಿನ ಧ್ವನಿಮುದ್ರಿಕೆ ಹಂಚಿಕೆಯಾಗುತ್ತಿದೆ. ಇದು ಸಂಪೂರ್ಣ ಸುಳ್ಳಿನಿಂದ ಕೂಡಿದ್ದು, ಮಾ.31ರಂದು ಜಿಲ್ಲಾಧಿಕಾರಿ ಹೊರಡಿಸಿದ ಆದೇಶವು ಊರ್ಜಿತದಲ್ಲಿರುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ.

ಸಾರ್ವಜನಿಕರು ಕನಿಷ್ಟ 1 ಮೀಟರ್ ಅಂತರವನ್ನು ಕಾಯ್ದುಕೊಳ್ಳಬೇಕಿದೆ. ಅಂಗಡಿ ಮಾಲಕರು ಕೂಡ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಎಚ್ಚರ ವಹಿಸಲು ಜಿಲ್ಲಾಡಳಿತ ಸೂಚಿಸಿದೆ. ಒಂದು ವೇಳೆ ಯಾವುದಾದರು ಅಂಗಡಿ ಮುಂಗಟ್ಟುಗಳಲ್ಲಿ ಜನಸಂದಣಿ ಮತ್ತು ಗುಂಪುಕೂಡುವುದು ಕಂಡು ಬಂದರೆ ಅಂತಹ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News