ಕೆಪಿಎಸ್‌ಸಿ ಪರೀಕ್ಷೆಗಳ ಮುಂದೂಡಿಕೆ

Update: 2020-04-01 15:59 GMT

ಬೆಂಗಳೂರು, ಎ.1: ರಾಜ್ಯಾದ್ಯಂತ ಕೊರೋನ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ 21 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದ್ದಾರೆ. ಅದರ ಪರಿಣಾಮ ಎ.11 ರಿಂದ ಮೇ 3ರವರೆಗೂ ಮೂರು ಹಂತದಲ್ಲಿ ನಡೆಯಲು ನಿಗದಿಯಾಗಿದ್ದ ವಿವಿಧ ಇಲಾಖಾ ಪರೀಕ್ಷೆಗಳನ್ನು ಮುಂದೂಡಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟನೆ ಹೊರಡಿಸಿದೆ.

ಹೊಸ ಪರೀಕ್ಷಾ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ಘೋಷಣೆ ಮಾಡಲಾಗುವುದು. ಈ ಮೊದಲು ಮಾ.31 ರಂದು ಹೊರಡಿಸಿದ್ದ ಆಯೋಗದ ಅಧಿಸೂಚನೆಯಲ್ಲಿ 2020 ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News