ಲಾಕ್‍ಡೌನ್: ಬಡವರಿಗೆ ಆಹಾರ ವಿತರಿಸಿದ ಶಾಸಕ ರಹೀಂ ಖಾನ್

Update: 2020-04-01 17:31 GMT

ಬೀದರ್, ಎ.1: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟಲು ದೇಶದಲ್ಲಿ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಬೀದರ್ ಶಾಸಕ ರಹೀಂಖಾನ್ ಅವರು ಬಡವರಿಗೆ ಆಹಾರ ಪೊಟ್ಟಣ ವಿತರಿಸಿ ಮಾನವೀಯತೆ ಮೆರೆಯುತ್ತಿದ್ದಾರೆ.

ಬೀದರ್ ನಗರದ ಎಲ್ಲ ವಾರ್ಡ್ ಹಾಗೂ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಇರುವ ಕಡು ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಅವರು ಆಹಾರ ಪೊಟ್ಟಣ ವಿತರಿಸಿದ್ದಾರೆ. ಅರ್ಹ ಫಲಾನುಭವಿಗಳಿಗೆ ಅಕ್ಕಿ, ಬೇಳೆ, ಎಣ್ಣೆ, ಖಾರ, ಉಪ್ಪು ಇನ್ನಿತರ ಅಗತ್ಯ ದಿನ ಬಳಕೆ ವಸ್ತುಗಳ ಆಹಾರ ಪೊಟ್ಟಣ ಉಚಿತವಾಗಿ ವಿತರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಹೀಂ ಖಾನ್ ಅವರು, ಹಿಂದಿನಿಂದಲೂ ದಾನ ಧರ್ಮ ಮಾಡುತ್ತ ಬಂದಿದ್ದೇನೆ. ಅದನ್ನು ನಿರಂತರ ಮುಂದುವರಿಸಿಕೊಂಡು ಹೋಗಲಿದ್ದೇನೆ. ಈಗ ಕೊರೋನ ಸೋಂಕಿನಿಂದ ಕಷ್ಟದಲ್ಲಿರುವವರಿಗೆ ಆಹಾರ ಪೊಟ್ಟಣ ವಿತರಿಸಿ ಜನರ ಸೇವೆ ಸಲ್ಲಿಸಿದ್ದೇನೆ. ಮಾನವೀಯ ಹಿನ್ನೆಲೆಯಲ್ಲಿ ಈ ಕೆಲಸವನ್ನು ಮಾಡಿದ್ದೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News