ಕೊರೋನ ವಿರುದ್ಧದ ಹೋರಾಟ ಜಾತಿ, ಧರ್ಮ, ಗಡಿಯನ್ನು ಮೀರಿದ್ದು: ಸಿದ್ದರಾಮಯ್ಯ

Update: 2020-04-02 11:32 GMT

ಬೆಂಗಳೂರು, ಎ.2: ಮಾರಕ ಕೊರೋನ ವೈರಸ್ ಸೋಂಕಿನ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಪಾದಿಸಿದ್ದಾರೆ.

ಗುರುವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದೆ. ಸಾಮಾನ್ಯ ಸಂಚಾರವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡೂ ರಾಜ್ಯಗಳ ನಡುವಿನ ಹೆದ್ದಾರಿಯನ್ನು ಮುಕ್ತಗೊಳಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಹಬ್ಬ ಸರಳವಾಗಿರಲಿ: ನಾಡಿನ ಸಮಸ್ತ ಬಂಧುಗಳಿಗೆ ರಾಮನವಮಿಯ ಶುಭಾಶಯಗಳು. ಈ ರಾಮನವಮಿ ಸರ್ವರಿಗೂ ಆರೋಗ್ಯದ ಭಾಗ್ಯವನ್ನು ಕರುಣಿಸಲಿ. ನಮ್ಮೆಲ್ಲರ ಆರೋಗ್ಯಕ್ಕಾಗಿ ಶ್ರಮಿಸುತ್ತಿರುವ ವೈದ್ಯ ದೇವರಿಗೆ ಕೃತಜ್ಞತೆ ಸಲ್ಲಿಸಿ ಕೈಮುಗಿಯುವೆ. ಹಬ್ಬ ಸರಳವಾಗಿರಲಿ, ಮನೆಯೊಳಗೆಯೇ ಇರಲಿ ಎಂದು ಸಿದ್ದರಾಮಯ್ಯ ಟ್ವೀಟ್ಟರ್ ಮೂಲಕ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News