ಉಡುಪಿ: ಕೊರೋನ ನಿಯಂತ್ರಣಕ್ಕೆ ನಿರ್ಮಿತಿ ಕೇಂದ್ರದಿಂದ 1 ಕೋಟಿ ರೂ. ದೇಣಿಗೆ

Update: 2020-04-02 14:00 GMT

ಉಡುಪಿ, ಎ.2: ರಾಜ್ಯದಲ್ಲಿ ಕೋವೆಡ್-19 ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಕೈಗೊಂಡಿರುವ ಕಾರ್ಯಕ್ರಮಗಳಿಗಾಗಿ ಉಡುಪಿ ನಿರ್ಮಿತಿ ಕೇಂದ್ರದಿಂದ ಒಂದು ಕೋಟಿ ರೂ. ಗಳ ಚೆಕ್‌ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಗುರುವಾರ ನೀಡಲಾಯಿತು.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಉಡುಪಿ ನಿರ್ಮಿತಿ ಕೇಂದ್ರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ಕುಮಾರ್ ದೇಣಿಗೆಯ ಚೆಕ್‌ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಪಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ನಿರ್ಮಿತಿ ಕೇಂದ್ರದ ಲಾಭಾಂಶದಲ್ಲಿ ಒಂದು ಕೋಟಿ ರೂ. ಗಳನ್ನು ಕೊರೋನಾ ನಿಯಂತ್ರಣ ಕುರಿತು ಸರಕಾರದ ಕಾರ್ಯಗಳಿಗೆ ನೆರವಾಗಲು ನೀಡಲಾಗಿದೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News