ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಮೃತ್ಯು

Update: 2020-04-02 14:49 GMT
ಸಾಂದರ್ಭಿಕ ಚಿತ್ರ

ತುಮಕೂರು, ಎ.2: ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ನಲ್ಲೂರು ಹಟ್ಟಿ ಗ್ರಾಮದಲ್ಲಿ ನಡೆದಿದೆ.

ರತ್ನಮ್ಮ (37) ಮಕ್ಕಳಾದ ಚಂದ್ರಿಕಾ (15) ಹಾಗೂ ಚೇತನ್ (15) ಮೃತಪಟ್ಟವರು.

ರತ್ನಮ್ಮ ತನ್ನ ಇಬ್ಬರು ಮಕ್ಕಳೊಂದಿಗೆ ಗ್ರಾಮದ ಕೆರೆಯಲ್ಲಿ ದನದ ಮೈ ತೊಳೆಯಲು ತೆರಳಿದ್ದು, ಈ ಸಂದರ್ಭ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News