ಮದ್ಯ ಸಿಗದ ಬೇಸರ: ಮೈಸೂರಿನಲ್ಲಿ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Update: 2020-04-02 16:49 GMT
ಸಾಂದರ್ಭಿಕ ಚಿತ್ರ

ಮೈಸೂರು,ಎ.2: ಮದ್ಯದ ಚಟ ಹತ್ತಿಸಿಕೊಂಡಿದ್ದ ವ್ಯಕ್ತಿಯೋರ್ವರು ಮಧ್ಯ ಸಿಗದ ಕಾರಣ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ನಗರದ ಗುಂಡೂರಾವ್ ನಗರದ ನಿವಾಸಿ ಆನಂದ್ (45) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೈಸೂರು ಅರಮನೆಯ ಮುಂಭಾಗದಲ್ಲಿ ಗೈಡ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಮದ್ಯ ಸೇವನೆ ಚಟಕ್ಕೆ ಬಿದ್ದಿದ್ದರು ಎನ್ನಲಾಗಿದೆ. ಆದರೆ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಇಡೀ ದೇಶವೇ ಲಾಕ್ ಡೌನ್ ಆಗಿರುವುದರಿಂದ ಎಲ್ಲೂ ಮದ್ಯ ಸಿಗದೆ ಬೇಸರಗೊಂಡು ಮನೆಯ ಮುಂಭಾಗ ಚಾಕುವಿನಿಂದ ತನ್ನ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಇವರನ್ನು ತಕ್ಷಣ ವಿದ್ಯಾರಣ್ಯಪುರ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News