ರಾಜ್ಯದಲ್ಲಿ ಇಂದಿನಿಂದ ಬಡವರಿಗೆ ಉಚಿತ ಹಾಲು ವಿತರಣೆ

Update: 2020-04-02 18:29 GMT

ಬೆಂಗಳೂರು, ಎ.2: ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 14ರವರೆಗೂ ಬಡವರಿಗೆ ಉಚಿತವಾಗಿ ಹಾಲು ವಿತರಣೆ ಮಾಡಲಾಗುತ್ತದೆ.

ಕೊರೋನ ಭೀತಿಯಿಂದಾಗಿ ದೇಶದಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದ್ದು, ಇದರನ್ವಯ ರಾಜ್ಯದಲ್ಲೂ ಸಂಪೂರ್ಣ ಬಂದ್ ಆಗಿದೆ. ಇದರ ಪರಿಣಾಮ ಕರ್ನಾಟಕ ಹಾಲು ಒಕ್ಕೂಟದಲ್ಲಿ ಪ್ರತಿನಿತ್ಯ 7 ಲಕ್ಷ ಲೀಟರ್ ಹಾಲು ಉಳಿತಾಯವಾಗುತ್ತಿದೆ. ಇದು ವ್ಯರ್ಥವಾಗದಂತೆ, ಬಡವರಿಗೆ ಹಂಚಲು ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News