ಮದ್ಯ ಸಿಗದ ಹಿನ್ನೆಲೆ: ಖಿನ್ನತೆಗೆ ಒಳಗಾಗಿ ವ್ಯಕ್ತಿ ಸಾವು

Update: 2020-04-03 18:16 GMT

ಬಳ್ಳಾರಿ, ಎ.3: ನಗರದ ಕನಕ ದುರ್ಗಮ್ಮ ದೇವಸ್ಥಾನ ಬಳಿ ಕುಡಿಯಲು ಮದ್ಯ ಸಿಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

'ಕೋವಿಡ್-19 ನಿಂದಾಗಿ ಎಲ್ಲೆಡೆ ಮದ್ಯ ಮಾರಾಟ ಸ್ಥಗಿತವಾಗಿದೆ. ಲಾಕ್‍ಡೌನ್‍ಗೂ ಮುನ್ನವೇ ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಕೊಂಡಿದ್ದ ಮದ್ಯ ಸಹ ಖಾಲಿಯಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಗ್ರಾಮದ ಎಲ್ಲ ಕಡೆ ಮದ್ಯಕ್ಕಾಗಿ ಓಡಾಡಿದ್ದಾನೆ. ಎಲ್ಲಿಯೂ ಮದ್ಯ ಸಿಕ್ಕಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಊಟ ಉಪಚಾರವನ್ನೂ ಬಿಟ್ಟ ಹಿನ್ನೆಲೆಯಲ್ಲಿ ಮೃತಪಟ್ಟಿರಬಹುದು' ಎಂದು ಸಂಬಂಧಿಕರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಜಿಲ್ಲೆಯ ಸಿರುಗುಪ್ಪ ತಾಲೂಕು ತೆಕ್ಕಲಕೋಟೆಯ ನಿವಾಸಿ ಶಶಿಧರ ಎಂದು ಗುರುತಿಸಲಾಗಿದ್ದು, ಹಬ್ಬಕ್ಕಾಗಿ ಬಳ್ಳಾರಿಗೆ ಬಂದಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News