ಸಿಎಂ ಪರಿಹಾರ ನಿಧಿಗೆ ಸಹಕಾರ ಇಲಾಖೆಯಿಂದ 31 ಕೋಟಿ ರೂ. ನೆರವು: ಸಚಿವ ಸೋಮಶೇಖರ್

Update: 2020-04-03 12:03 GMT

ಬೆಂಗಳೂರು, ಎ.3: ಕೊರೋನ ವೈರಸ್ ಸೋಂಕಿನ ನಿವಾರಣೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಹಕಾರ ಇಲಾಖೆಯಿಂದ ಒಟ್ಟು 31 ಕೋಟಿ ರೂಪಾಯಿ ನೆರವು ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪತ್ರ ಬರೆದಿರುವ ಅವರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಮಾರಾಟ ಮಂಡಳಿಯಿಂದ 23 ಕೋಟಿ ರೂ., ಅಪೆಕ್ಸ್ ಬ್ಯಾಂಕ್-5 ಕೋಟಿ ರೂ., ರಾಜ್ಯ ಸಹಕಾರ ಮಹಾ ಮಂಡಳಿ-2 ಕೋಟಿ ರೂ., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್-1.22 ಕೋಟಿ ರೂ., ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ-53 ಲಕ್ಷ ರೂ., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರ ವೈಯಕ್ತಿಕ 10 ಲಕ್ಷ ರೂ. ಸೇರಿದಂತೆ ಒಟ್ಟು 31.85 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News