ಮೈಸೂರು: ಹಲವು ಗ್ರಾಮಗಳಲ್ಲಿ ಭೂಮಿ ಕಂಪನ

Update: 2020-04-03 13:34 GMT

ಮೈಸೂರು,ಎ.3: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವಾಗಿ ಜನರು ಮನೆಯಿಂದ ಹೊರ ಬಂದ ಘಟನೆ ನಡೆದಿದೆ.

ಲಾಕ್‍ಡೌನ್ ಹಿನ್ನಲೆಯಲ್ಲಿ ಮನೆಯಲ್ಲಿದ್ದ ಜನರಿಗೆ ಶುಕ್ರವಾರ ಸಂಜೆ 5 ಗಂಟೆ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಭಯಭೀತರಾದ ಜನ ಮನೆಯಿಂದ ಹೊರ ಬಂದು ಗುಂಪು ಗುಂಪಾಗಿ ನಿಂತರು.

ತಾಲೂಕಿನ ಸಾಲಿಗ್ರಾಮ, ಅಂಕನಹಳ್ಳಿ, ಚುಂಚನಕಟ್ಟೆ, ಹೊಸೂರು, ತಂದ್ರೆ, ಕರ್ಪೂರವಳ್ಳಿ, ಕಟ್ನಾಳು ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಅದೇ ರೀತಿ ಪಿರಿಯಾಪಟ್ಟಣ ತಾಲೂಕಿನ ಹರವೆ, ಹಿರಿಕ್ಯಾತನಹಳ್ಳಿಗಳಲ್ಲೂ ಅನುಭವವಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News