ಬೈಂದೂರು: ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

Update: 2020-04-03 15:59 GMT

ಬೈಂದೂರು, ಎ.3: ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸೂರಿನಲ್ಲಿ ನಡೆದಿದೆ.

ಶಿರೂರಿನ ಆ್ಯಂಟನಿ ಜೋಸೆಫ್ ಎಂಬವರ ತಮ್ಮ ಸಜಿ (44) ಆತ್ಮಹತ್ಯೆ ಮಾಡಿಕೊಂಡವರು. ಇವರು ಹೊಸೂರಿನ ಮಾಚ ಪೂಜಾರಿ ಎಂಬವರ ರಬ್ಬರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದು, ವಿಪರೀತ ಮದ್ಯಪಾನದ ಚಟ ಹೊಂದಿದ್ದರೆನ್ನಲಾಗಿದೆ. 4ದಿನಗಳ ಹಿಂದೆ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ಇವರು ಅಣ್ಣನ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಎ.1ರಂದು ರಾತ್ರಿ 10ಗಂಟೆಗೆ ಊಟ ಮಾಡಿ ಮನೆಯಿಂದ ಹೊಸೂರಿನ ಮಾಚ ಪೂಜಾರಿ ಅವರ ತೋಟಕ್ಕೆ ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ಇವರು ಹೊಸೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ತನ್ನ ಮನೆಯ ಬಳಿಯ ಕಲ್ಲುಕೋರೆಯ ಹೊಂಡದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸಜಿ ಅವರ ಮರಣದಲ್ಲಿ ಸಂಶಯವಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News