ದೀಪ ಹಚ್ಚುವುದರಿಂದ ಕೊರೋನ ಹೋಗುತ್ತದೆಯೇ: ಸಿದ್ದರಾಮಯ್ಯ ಪ್ರಶ್ನೆ

Update: 2020-04-03 16:06 GMT

ಮೈಸೂರು, ಎ.3: ದೀಪ ಹಚ್ಚುವುದರಿಂದ ಕೊರೋನ ಹೋಗುತ್ತದೆಯೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಎ.5ರ ರವಿವಾರ ರಾತ್ರಿ 9 ಗಂಟೆಗೆ ದೀಪ ಹಚ್ಚಿ ಎಂಬ ಹೇಳಿಕೆ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ದೀಪ ಹಚ್ಚಿದರೆ ಕೊರೋನ ಹೋಗುತ್ತದೆಯೆ? ಹಾಗಿದ್ದರೆ ಹಚ್ಚಲಿ ಬಿಡಿ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News