ಆರೋಗ್ಯ ಇಲಾಖೆಯ ಮಹಿಳಾ ಅಧಿಕಾರಿಯೊಂದಿಗೆ ಅನುಚಿತ ವರ್ತನೆ: ಆರೋಪಿ ಸೆರೆ

Update: 2020-04-03 18:13 GMT

ಬೆಂಗಳೂರು, ಎ.3: ಆರೋಗ್ಯ ಇಲಾಖೆಯ ಮಹಿಳಾ ಅಧಿಕಾರಿ ಯೊಂದಿಗೆ ಅನುಚಿತವಾಗಿ ವರ್ತಿಸಿದ ಕಲ್ಲಂಗಡಿ ಹಣ್ಣಿನ ವ್ಯಾಪಾರಿಯನ್ನು ಆರ್.ಟಿ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರ್.ಟಿ. ನಗರದ ಮಠದಹಳ್ಳಿಯ ನಸೀರ್ (35) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಆರೋಪಿಯು ಮಠದಹಳ್ಳಿಯ ಪಿಆರ್ಟಿಸಿ ಜಂಕ್ಷನ್ ಬಳಿ ತಳ್ಳುಗಾಡಿಯಲ್ಲಿ ಕಲ್ಲಂಗಡಿ ಹಣ್ಣನ್ನು ಕತ್ತರಿಸಿ ಮಾರಾಟ ಮಾಡುತ್ತಿದ್ದನು. ಇದನ್ನು ಗಮನಿಸಿದ ಆರೋಗ್ಯ ಇಲಾಖೆ ಮಹಿಳಾ ಅಧಿಕಾರಿ ಕೊರೋನ ಹಿನ್ನೆಲೆಯಲ್ಲಿ ಕತ್ತರಿಸಿ ಹಣ್ಣುಗಳನ್ನು ಮಾರಾಟ ಮಾಡದಂತೆ ಸೂಚನೆ ನೀಡಿದಾಗ ಅವರೊಂದಿಗೆ ಜಗಳವಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಈ ಸಂಬಂಧ ಆರ್.ಟಿ. ನಗರಠಾಣೆ ಪೊಲೀಸರಿಗೆ ಮಹಿಳಾ ಅಧಿಕಾರಿಯು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News