ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣ: ಎಫ್‍ಐಆರ್ ದಾಖಲು

Update: 2020-04-05 11:31 GMT

ಬೆಂಗಳೂರು, ಎ.5: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಸಂಚಾರ ಠಾಣೆ ಪೊಲೀಸರು ಎಫ್‍ಐಆರ್ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

ನಟಿ ಶರ್ಮಿಳಾ ಮಾಂಡ್ರೆ ಮತ್ತು ಲೋಕೇಶ್ ಇಬ್ಬರನ್ನೂ ಗಾಯಾಳು ಎಂದು ನಮೂದು ಮಾಡಿ ಸೆಕ್ಷನ್ 279 ಅತಿವೇಗ, ಅಜಾಗರೂಕತೆ, 134(b) ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡದೆ ಮುಚ್ಚಿಟ್ಟಿರುವುದು, ಅಪಘಾತದಲ್ಲಿ ಗಾಯವಾಗಿರುವುದನ್ನ ಮುಚ್ಚಿಡಲು ಪ್ರಯತ್ನ, ಜಾಲಿರೈಡ್ ಶಂಕೆ ಆಧಾರದ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಘಟನೆ ನಡೆದ ನಂತರ ನಟಿ ಖಾಸಗಿ ಆಸ್ಪತ್ರೆಗೆ ತೆರಳಿ, ಅಪಘಾತವಾದ ನಿಜವಾದ ಸ್ಥಳದ ಬಗ್ಗೆ ಹೇಳದೆ, ಜಯನಗರದಲ್ಲಿ ಮರಕ್ಕೆ ಕಾರು ಢಿಕ್ಕಿಯಾಗಿ ಅವಘಡ ಸಂಭವಿಸಿದ್ದಾಗಿ ತಿಳಿಸಿದ್ದರು. ಇದರಿಂದ ಅನುಮಾನಗೊಂಡ ಆಸ್ಪತ್ರೆ ಸಿಬ್ಬಂದಿ ಗಾಯಾಳುವನ್ನು ಚಿಕಿತ್ಸೆಗೊಳಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಏನಿದು ಘಟನೆ: ಶನಿವಾರ ನಸುಕಿನ ಜಾವ ನಿಷೇಧಾಜ್ಞೆ ಉಲ್ಲಂಘನೆ ಮಾಡಿ ಕಾರಿನಲ್ಲಿ ನಟಿ ಹಾಗೂ ಇತರೆ ಸ್ನೇಹಿತರು ಹೈಗ್ರೌಂಡ್ಸ್ ಸಂಚಾರ ಠಾಣಾ ವ್ಯಾಪ್ತಿಯ ವಸಂತನಗರದ ಕೆಳ ಸೇತುವೆ ಬಳಿ ಅಪಘಾತ ಮಾಡಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News