ಈಜಲು ತೆರಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

Update: 2020-04-05 16:15 GMT

ಚಾಮರಾಜನಗರ, ಎ.5: ಈಜಲು ಕೆರೆಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಅಮಚವಾಡಿ ಬಳಿಯ ಕೆರೆಯಲ್ಲಿ ಸಂಭವಿಸಿದೆ.

ಚಾಮರಾಜನಗರದ ಗಾಳಿಪುರ ನಿವಾಸಿಗಳಾದ ಶರಾನ್ (16) ಸೈಯದ್ (17) ಮೃತಪಟ್ಟವರು.

ಇಂದು ಸಂಜೆ ಕೆರೆಯಲ್ಲಿ ಈಜಲು ತೆರಳಿದ್ದಾಗ ಈ ಘಟನೆ ನಡೆದಿದೆ. ಯುವಕರಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಸರ್ಕಲ್ ಇನ್ಸ್ ಪೆಕ್ಟರ್ ಮಂಜು, ಗ್ರಾಮಾಂತರ ಪಿಎಸ್‍ಐ ಲೋಹಿತ್ ಹಾಗೂ ಮುಖ್ಯ ಪೇದೆ ದೊಡ್ಡವೀರಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News