ಸಾಮಾಜಿಕ ಜಾಲತಾಣದಲ್ಲಿ ಕುರ್‌ಆನ್ ಬಗ್ಗೆ ಅವಹೇಳನ: ಪುತ್ತೂರಿನ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Update: 2020-04-06 05:35 GMT

ಪುತ್ತೂರು, ಎ.6: ಸಾಮಾಜಿಕ ಜಾಲತಾಣದಲ್ಲಿ ಕುರ್‌ಆನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಬಗ್ಗೆ ಪುತ್ತೂರು ತಾಲೂಕಿನ ಬೆಳಂದೂರು ಗ್ರಾಮದ ಅಭೀರ ನಿವಾಸಿಯಾದ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಭೀರ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಕುಸುಮಾಧರ ಆರೋಪಿ. ಈತ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಪವಿತ್ರ ಗ್ರಂಥವಾದ ಕುರ್‌ಆನ್ ಬಗ್ಗೆ ಅವಮಾನಿಸಿ ಮತ್ತು ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವುದಲ್ಲದೆ ದೇಶದ ಹಿಂದೂ ಮತ್ತು ಮುಸ್ಲಿಂ ನಡುವೆ ಕೋಮು ಪ್ರಚೋದನೆ ಉಂಟು ಮಾಡಿ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಡುವ ಪೋಸ್ಟನ್ನು ಹಾಕಿದ್ದಾನೆ ಎಂದು ಸವಣೂರಿನ ಎಸ್‌ಡಿಪಿಐ ಕಾರ್ಯಕರ್ತ ಮುಹಮ್ಮದ್ ಸಹೀರ್ ಎಂಬವರು ಬೆಳ್ಳಾರೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ವಿರುದ್ದ ಐಪಿಸಿ ಸೆಕ್ಷನ್153ಎ,505(2) ಕಾಲಂ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News