ಅಂತರ್ಜಿಲ್ಲಾ ಸಾರಿಗೆ ಪಾಸ್‍ಗಳನ್ನು ತಹಶೀಲ್ದಾರ್ ಗಳು ವಿತರಿಸುವಂತಿಲ್ಲ: ಸರಕಾರದ ಮುಖ್ಯ ಕಾರ್ಯದರ್ಶಿ

Update: 2020-04-06 18:34 GMT

ಬೆಂಗಳೂರು, ಎ.6: ಅಂತರ ಜಿಲ್ಲಾ ಸಾರಿಗೆ ಪಾಸ್‍ಗಳನ್ನು ತಹಶೀಲ್ದಾರ್ ಗಳು ವಿತರಿಸುವಂತಿಲ್ಲ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಸೋಮವಾರ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಹಂತದಲ್ಲಿ ಮಾತ್ರ ಈ ಪಾಸ್‍ಗಳನ್ನು ನೀಡಬಹುದು ಎಂದು ತಿಳಿಸಿದ್ದಾರೆ.

ಕೆಲವು ಕಡೆ ತಹಶೀಲ್ದಾರ್ ಗಳು ಅಂತರಜಿಲ್ಲಾ ಸಾರಿಗೆ ಪಾಸ್ ವಿತರಿಸುವುದು ಗಮನಕ್ಕೆ ಬಂದಿದೆ. ಈ ವ್ಯವಸ್ಥೆಯನ್ನು ನಿಲ್ಲಿಸಿ, ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಮಾತ್ರ ಈ ಪಾಸ್ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿಯವರು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News