ಕೊರೋನ ನಿಯಂತ್ರಣಕ್ಕೆ ಕ್ರಮ: ಉಡುಪಿ ಜಿಲ್ಲಾಡಳಿತವನ್ನು ಅಭಿನಂದಿಸಿದ ಸಚಿವ ಬೊಮ್ಮಾಯಿ

Update: 2020-04-07 13:06 GMT

ಉಡುಪಿ, ಎ.7: ಉಡುಪಿ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿ ದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳನ್ನು ರಾಜ್ಯದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲೆಯ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳು ಮತ್ತು ಜಿಲ್ಲೆಯ ಇತರೆ ಸಮಸ್ಯೆ ಗಳ ಕುರಿತು ನಡೆದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು, ಸಿಇಓ, ಎಸ್ಪಿ, ಅರೋಗ್ಯ ಇಲಾಖೆ ಮತ್ತು ಇತರೆ ಸಂಬಂದಪಟ್ಟ ಎಲ್ಲಾ ಇಲಾಖೆಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಸುಹಿತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದ ಸಚಿವ ಬೊಮ್ಮಾಯಿ, ಉಡುಪಿ ಜಿಲ್ಲೆಯ ಪಕ್ಕದ ಜಿಲ್ಲೆಗಳಾದ ದ.ಕನ್ನಡ ಮತ್ತು ಉ.ಕನ್ನಡದಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗಿರುವುದರಿಂದ ಜಿಲ್ಲೆಯ ಗಡಿ ಪ್ರದೇಶವನ್ನು ಹೆಚ್ಚು ಬಿಗಿಗೊಳಿಸು ವಂತೆ ಹಾಗೂ ಆ ಜಿಲ್ಲೆಗಳಿಂದ ಅವಶ್ಯಕ ಸಾಮಗ್ರಿ ಸಾಗಿಸುವ ವಾಹನಗಳ ಹೊರತು, ಅನಗತ್ಯವಾಗಿ ಸಂಚಾರ ನಡೆಸುವ ವರನ್ನು ಕಟ್ಟು ನಿಟ್ಟಾಗಿ ನಿರ್ಭಂದಿಸುವಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಸೂಚನೆಗಳನ್ನು ನೀಡಿದರು.

ಜಿಲ್ಲೆಯ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ, ಆರೋಗ್ಯ ಇಲಾಖೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದ ಸಚಿವರು, ನಗರ ಪ್ರದೇಶದಲ್ಲಿ ಸಹ ಆರೋಗ್ಯ ತಪಾಸಣೆ ನಡೆಸಿ. ಈ ಕಾರ್ಯಕ್ಕೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ನೆರವು ಪಡೆಯಿರಿ. ಈ ವೇಳೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ತಪಾಸಣೆ ನಡೆಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೆಲೆದೋರದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಬೊಮ್ಮಾಯಿ ಕಿವಿಮಾತು ಹೇಳಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೆಲೆದೋರದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಬೊಮ್ಮಾಯಿ ಕಿವಿಮಾತು ಹೇಳಿದರು.

ಉಡುಪಿ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳನ್ನು ಗುರುತಿಸಲಾಗಿದ್ದು, ಆ ಗ್ರಾಮಗಳಿಗೆ ಸಂಬಂದಿಸಿದಂತೆ ಈಗಾಗಲೇ ಕ್ರಿಯಾ ಯೋಜನೆ ರೂಪಿಸಲಾಗಿದೆ. ಪ್ರತಿ 2 ದಿನಕ್ಕೊಮ್ಮೆ ಎಲ್ಲಾ ಗ್ರಾಮ ಪಂಚಾಯತ್‌ಗಳ ಸಭೆ ನಡೆಸಲಾ ಗುತ್ತಿದೆ. ಪ್ರಸ್ತುತ ಯಾವುದೇ ಸಮಸ್ಯೆ ಇಲ್ಲ ಎಂದು ಸಿಇಓ ಪ್ರೀತಿ ಗೆಹ್ಲೋಟ್ ತಿಳಿಸಿದರು.

ಜಿಲ್ಲೆಯಲ್ಲಿ ಕೃಷಿಕರ ಬೆಳಗೆ ಯಾವುದೇ ಹಾನಿಯಾಗದಂತೆ, ಕಲ್ಲಂಗಡಿ, ಮಟ್ಟುಗುಳ್ಳ, ಅನಾನಸ್ ಸೇರಿದಂತೆ ವಿವಿಧ ಬೆಳಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಲಾಗಿದೆ.ಕೃಷಿಗೆ ಪೂರಕವಾಗಿ ಕೀಟನಾಶಕ, ಬಿತ್ತನೆ ಬೀಜ ಮತ್ತು ರಸಗೊಬ್ಬರಗಳಿಗೆ ಕೊರತೆ ಯಾಗದಂತೆ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಭತ್ತದ ಕಟಾವು ನಡೆಯುತ್ತಿದೆ. ಎಪಿಎಂಸಿ, ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಗೆ ವಿದೇಶಗಳಿಂದ ಬಂದಿರುವ 1974 ಭಾರತೀಯರು ಮತ್ತು 16 ಮಂದಿ ವಿದೇಶಿಯರು ಸೇರಿದಂತೆ ಒಟ್ಟು 1990 ಜನರ ಕ್ವಾರಂಟೈನ್ ಅವಧಿ ಎ.5ಕ್ಕೆ ಮುಕ್ತಾಯಗೊಂಡಿದೆ. ಇನ್ನೂ 14 ದಿನ ಅವರನ್ನು ನಿಗಾದಲ್ಲಿಡಲಾಗಿದೆ. ಪಾಸಿಟಿವ್ ಪ್ರಕರಣ ಕಂಡು ಬಂದ 3 ವ್ಯಕ್ತಿಗಳ ಸಂಪರ್ಕ ದಲ್ಲಿದ್ದ 43 ವ್ಯಕ್ತಿಗಳನ್ನು ಕ್ವಾರಂಟೈನ್‌ನಲ್ಲಿಟ್ಟಿದ್ದು, ಎಲ್ಲರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಹಾಗೂ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಎಸ್ಪಿ ವಷ್ಣುವರ್ಧನ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಕೊರೋನ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News